ಕನ್ನಡದ ಸೊಲ್ಲರಿಮೆ - ಎರಡನೇ ಹೊತ್ತಗೆ ಮಾರುಕಟ್ಟೆಗೆ!



ಡಾ. ಡಿ ಎನ್ ಶಂಕರಬಟ್ ಅವರ "ಕನ್ನಡ ಬರಹದ ಸೊಲ್ಲರಿಮೆ - ೨" ಹೊತ್ತಗೆ ಮಾರುಕಟ್ಟೆಗೆ ಬಂದಿದೆ. ಮೊದಲ ಹೊತ್ತಗೆಯಲ್ಲಿ ಸೊಲ್ಲರಿಮೆಯ ಅಗತ್ಯ, ಸ್ವರೂಪಗಳ ಮುನ್ನೋಟ ಮತ್ತು ಹೆಸರು ಪದಗಳ ಬಗ್ಗೆ ವಿವರಿಸಲಾಗಿತ್ತು. ಈ ಹೊತ್ತಗೆಯಲ್ಲಿ ಎಸಕಪದಗಳ ಬಳಕೆ ಮತ್ತು ಹೆಸರುಕಂತೆಗಳ ಇಟ್ಟಳಗಳ ಬಗ್ಗೆ ವಿವರಿಸಿದ್ದಾರೆ.

ಕನ್ನಡದ ಸೊಲ್ಲರಿಮೆ...

ಕಳೆದ ವರ್ಶದ ಆಗಸ್ಟ್ ತಿಂಗಳಲ್ಲಿ ನಾವು "ಅಂತೂ ಬಂತು ಕನ್ನಡದ್ದೇ ವ್ಯಾಕರಣ..." ಎನ್ನುವ ಬರಹ ಬರೆದಿದ್ದೆವು. ಆ ಹೊತ್ತಗೆಯ ಮೊದಲಲ್ಲಿ ಡಾ. ಶಂಕರಬಟ್ ಅವರು ಬರೆದಿದ್ದ ಈ ಕೆಳಗಿನ ಮಾತುಗಳತ್ತ ಒಮ್ಮೆ ಮರುನೋಟ ಬೀರೋಣ.
ಅರಿಮೆಯ (ವಿಜ್ನಾನದ) ಬರಹಗಳಲ್ಲಿ ಹೊಸ ಪದಗಳನ್ನು ಹುಟ್ಟುಹಾಕಬೇಕೆಂದಿರುವವರು ಸಂಸ್ಕ್ರುತದ ಮೊರೆ ಹೋಗುವ ಬದಲು, ಕನ್ನಡದಲ್ಲೇನೇ ತಮಗೆ ಬೇಕಾಗಿರುವ ಪದಗಳನ್ನು ಉಂಟುಮಾಡಲು ಇದು ತಿಳಿವನ್ನೀಯಬಲ್ಲದು.

ನನ್ನ ಇತ್ತೀಚೆಗಿನ ಕನ್ನಡ ವ್ಯಾಕರಣ ಯಾಕೆ ಬೇಕು? ಎಂಬ ಹೊತ್ತಗೆಯಲ್ಲಿ ಹಲವು ಬಗೆಯ ಕಲಿಕೆ ಮತ್ತು ಉದ್ಯೋಗಗಳಲ್ಲಿ ಕನ್ನಡದ ಸೊಲ್ಲರಿಮೆ ಹೇಗೆ ನೆರವಿಗೆ ಬರಬಲ್ಲದು ಎಂಬುದನ್ನು ವಿವರಿಸಿದ್ದೇನೆ. ಅಂತಹ ನೆರವನ್ನು ಕೊಡಬಲ್ಲ ಹೊತ್ತಗೆಗಳನ್ನು ಬರೆಯುವವರಿಗೆ ಈ ಕನ್ನಡ ಬರಹದ ಸೊಲ್ಲರಿಮೆ ಅಡಿಗಟ್ಟನ್ನೊದಗಿಸುವಂತಾಗಲಿ ಎಂಬುದು ನನ್ನ ಹಾರೈಕೆ.

ಅರಿಮೆಯ ಬರಹಕ್ಕೆ ಬೇಕಾಗಿ ಬರುವ ಪದಗಳನ್ನೆಲ್ಲ ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ ಮತ್ತು ಅಂತಹ ಪದಗಳನ್ನು ಬಳಸುವುದರಿಂದ ತೊಂದರೆಯೇನೂ ಆಗುವುದಿಲ್ಲ ಎಂಬುದನ್ನು ತೋರಿಸಿಕೊಡುವುದೂ ಈ ಹೊತ್ತಗೆಯ ಒಂದು ಗುರಿಯಾಗಿದೆ.

ನನ್ನ ಇತ್ತೀಚೆಗಿನ ಕನ್ನಡ ವ್ಯಾಕರಣ ಯಾಕೆ ಬೇಕು? ಎಂಬ ಹೊತ್ತಗೆಯಲ್ಲಿ ಹಲವು ಬಗೆಯ ಕಲಿಕೆ ಮತ್ತು ಉದ್ಯೋಗಗಳಲ್ಲಿ ಕನ್ನಡದ ಸೊಲ್ಲರಿಮೆ ಹೇಗೆ ನೆರವಿಗೆ ಬರಬಲ್ಲದು ಎಂಬುದನ್ನು ವಿವರಿಸಿದ್ದೇನೆ. ಅಂತಹ ನೆರವನ್ನು ಕೊಡಬಲ್ಲ ಹೊತ್ತಗೆಗಳನ್ನು ಬರೆಯುವವರಿಗೆ ಈ ಕನ್ನಡ ಬರಹದ ಸೊಲ್ಲರಿಮೆ ಅಡಿಗಟ್ಟನ್ನೊದಗಿಸುವಂತಾಗಲಿ ಎಂಬುದು ನನ್ನ ಹಾರೈಕೆ.
ಬಾಶಾ ಪ್ರಕಾಶನದವರು ಹೊರತಂದಿರುವ ಈ ಹೊತ್ತಗೆಯನ್ನು ಮಂಗಳೂರಿನ ಅತ್ರಿ ಬುಕ್ ಸೆಂಟರ್ ಅವರು ಹಂಚಿಕೆ/ ಮಾರಾಟ ಮಾಡುತ್ತಿದ್ದಾರೆ. ಬೆಂಗಳೂರಿನ ಹೆಸರಾಂತ ಹೊತ್ತಗೆಯಂಗಡಿಗಳಲ್ಲಿ ಸಿಗುತ್ತಿದೆ. ಕನ್ನಡದ ಸೊಲ್ಲರಿಮೆಯನ್ನು ಅರಿಯಬೇಕೆಂದವರಿಗೆ ಇದೊಂದು ಒಳ್ಳೆಯ ಹೊತ್ತಗೆ. ನೀವೂ ಕೊಂಡು ಓದಿ, ನಿಮ್ಮವರಿಗೂ ತಿಳಿಸಿ.

0 ಅನಿಸಿಕೆಗಳು:

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails