ನಲಿವಿನ ಹಾರೈಕೆಗಳು ನೆಚ್ಚಿನ ಕಂಬಾರ ಅವರಿಗೆ !

ಕನ್ನಡನಾಡಿನ ಹೆಮ್ಮೆಯ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರಿಗೆ ಈಗ ಜ್ಞಾನಪೀಠ ಪ್ರಶಸ್ತಿಯ ಗರಿ. ಇದು ಕರ್ನಾಟಕಕ್ಕೆ ಎಂಟನೆ ಬಾರಿ ಸಂದ ಗೌರವ. ಜಾನಪದ ಸೊಗಡನ್ನು ತಮ್ಮ ಬರವಣಿಗೆಯಲ್ಲಿ ಮೈದಾಳಿಕೊಂಡು ಬಂದಿರುವ ಚಂದ್ರಶೇಖರ ಕಂಬಾರರು ಹಲವು ಪ್ರತಿಭೆಗಳ ಸಂಗಮ. ಕವಿ, ನಾಟಕಕಾರ, ಚಿತ್ರನಟ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಅಧ್ಯಾಪಕ, ಜಾನಪದ ತಜ್ಞ, ಆಡಳಿತಗಾರ ಹೀಗೆ ಹತ್ತು ಹಲವು ಪಾತ್ರಗಳಲ್ಲಿ ಕನ್ನಡ ಸಾಹಿತ್ಯ ಲೋಕದ ಸಿರಿಯನ್ನು ಹೆಚ್ಚಿಸಿದವರು ಇವರು. ಕುವೆಂಪು, ಶಿವರಾಮ ಕಾರಂತ, ದ ರಾ ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ ಕೃ ಗೋಕಾಕ, ಗಿರೀಶ್ ಕಾರ್ನಾಡ್ ಮತ್ತು ಯು ಆರ್ ಅನಂತಮೂರ್ತಿಯವರ ನಂತರ ಈಗ ಕಂಬಾರರು ಕರ್ನಾಟಕಕ್ಕೆ ಗೌರವ ತಂದಿದ್ದಾರೆ. ಅವರಿಗೆ ಬನವಾಸಿ ಬಳಗ ಮನದುಂಬಿ ಶುಭಾಶಯಗಳನ್ನು  ಸಲ್ಲಿಸುತ್ತದೆ.

4 ಅನಿಸಿಕೆಗಳು:

ಪುಟ್ಟ ಅಂತಾರೆ...

ಅಭಿನಂದನೆಗಳು

ಪುಟ್ಟ ಅಂತಾರೆ...

ಅಭಿನಂದನೆಗಳು

gkdini ಅಂತಾರೆ...

chandra shekara kambara avarige danyavadgalu. avrige gnana peeta prashasti bandiruvudu samastha kannadigarigu hemmeaa vishya.

anup kalapur ಅಂತಾರೆ...

kambar avrige jyana peetha prashasti bandiruvudu kannadigarige hemmeya sangati

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails