ಕನ್ನಡಿಗ: ಸಾಧುಂಗೆ ಸಾಧು....


ಇದು ಬಾದಾಮಿಯ ಕಪ್ಪೆ ಅರಭಟ್ಟನ ಶಾಸನದ ಬರಹ. ಇದರ ಪ್ರಮುಖ ಸಾಲುಗಳು ಮೂಲತಃ ಕಪ್ಪೆ ಅರಭಟ್ಟನ್ನ ವರ್ಣಿಸುದ್ರೂ ಇದನ್ನು ಸಾಮಾನ್ಯವಾಗಿ ನಾವೆಲ್ಲಾ ಬಳಸೋದು ಕನ್ನಡಿಗನನ್ನು ವರ್ಣಿಸೋಕೇ ಎಂದೇ... ಏಳನೇ ಶತಮಾನದ ಈ ಶಾಸನದಲ್ಲಿ ಹೀಗಿದೆ:
ಸಾಧುಂಗೆ ಸಾಧು
ಮಾಧುರ್ಯಂಗೆ ಮಾಧುರ್ಯನ್
ಬಾಧಿಪ್ಪ ಕಲಿಕೆ ಕಲಿಯುಗ ವಿಪರೀತನ್
ಮಾಧವನೀತನ್ ಪೆರನಲ್ಲ... 
ಅಂದರೆ ಈತನು ಸಾಧುಗಳಿಗೆ ಸಾಧುವೂ, ಮಧುರವಾಗಿ ವ್ಯವಹರಿಸುವವರೊಡನೆ ಮಧುರವಾಗಿ ವ್ಯವಹರಿಸುವವನೂ, ತೊಂದರೆಕೊಡುವವರಿಗೆ ಕಲಿಯುಗ ಯಮನೂ ಆಗಿರುವನು ಮತ್ತು ಈತ ಮಾಧವನಲ್ಲದೆ ಬೇರಾರೂ ಅಲ್ಲಾ... ಎಂದು. ಇಂತಹ ಹೊಗಳಿಕೆಗೆ ಅಂದಿನ ಕನ್ನಡಿಗ ಪಾತ್ರನಾಗಿದ್ದ ಎನ್ನುವುದನ್ನು ನೆನೆದಾಗ ಮನ ಹಿಗ್ಗುತ್ತದೆ. 

ಈಗ್ಯಾಕಪ್ಪಾ ಈ ಮಾತು ಅಂದರೆ...

ಹೌದು, ಈಗ್ಯಾಕಪ್ಪಾ ಈ ಮಾತೂ ಅಂದ್ರೆ, ಇತ್ತೀಚಿಗೆ ಟೈಮ್ಸ್ ಆಫ಼್ ಇಂಡಿಯಾ ಪತ್ರಿಕೆಯಲ್ಲೊಂದು ಸುದ್ದಿ ಪ್ರಕಟವಾಗಿತ್ತು. ಅದು ವಿಕೀಲೀಕ್ಸ್ ಲೀಕ್ ಮಾಡಿದ ಸುದ್ದಿ. ಅದರಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ಼್ ಅಮೇರಿಕಾಗೆ ಹೋಗಲು ಬಯಸುವವರು ವೀಸಾಗಾಗಿ ಅರ್ಜಿ ಸಲ್ಲಿಸಿದಾಗ ಯಾವ ಭಾಷಿಕರಿಗೆ ಸರಳವಾಗಿ ವೀಸಾ ಸಿಗುತ್ತದೆ ಎಂಬ ಬಗ್ಗೆ ಮಾಹಿತಿ ಇದೆ. "ಇಂಗ್ಲೀಷೇತರ ಅರ್ಜಿದಾರ ದಕ್ಷಿಣ ಭಾರತೀಯರಲ್ಲಿ, ಕನ್ನಡಿಗರಿಗೆ ವೀಸಾ ಸಿಗೋದು ಸುಲಭ.. ಯಾಕೆಂದರೆ ಇವರಲ್ಲಿ ಮಾಹಿತಿ ನೀಡುವಲ್ಲಿ ಪ್ರಮಾದವೆಸಗುವರ ಪ್ರಮಾಣ ಉಳಿದವರಿಗಿಂತಾ ಕಡಿಮೆ, ಇವರು ಆರ್ಥಿಕವಾಗಿ ಸಬಲರು" ಎಂದು ಈ ವರದಿಯಲ್ಲಿ ಪ್ರಕಟವಾಗಿದೆ. 


ಕನ್ನಡಿಗರು ಪ್ರಾಮಾಣಿಕರು ಅನ್ನೋದು ಕನ್ನಡಿಗರು ಸಹೃದಯರು, ಶಾಂತಿಪ್ರಿಯರು, ಸಹನಶೀಲರು ಎಂಬೆಲ್ಲಾ ಬಿರುದುಗಳಂತೆಯೇ ಒಂದು ವಿಶೇಷಣವಾಗಿದ್ದು ನಾವೆಲ್ಲಾ ಹೆಮ್ಮೆ ಪಡಲು ಕಾರಣವಾಗಿದೆ. ಜೊತೆಯಲ್ಲೇ ನಮ್ಮ ಮೇಲಾಗುವ ದಬ್ಬಾಳಿಕೆಯ ವಿರುದ್ಧ ದನಿ ಎತ್ತಿದಾಗೆಲ್ಲಾ ಕನ್ನಡಿಗರನ್ನು ಸುಮ್ಮನಾಗಿಸಲೆಂದೇ ಇಂತಹ ವಿಶೇಷಣಗಳು ಬಳಕೆಯಾಗುತ್ತಿರುವುದನ್ನು ಕಂಡಾಗ ಈ ಮತ್ತೊಂದು ಬಿರುದಿನ ಬಗ್ಗೆ ಆತಂಕವೂ ಆಗುತ್ತಿದೆ ಗುರೂ!

3 ಅನಿಸಿಕೆಗಳು:

baktavar ಅಂತಾರೆ...

ನಿಜ ಗುರು ಮಾಧ್ಯಮಗಳು ಕನ್ನಡಿಗರ ಕಿವಿ ಮೇಲೆ ಹೂವು ಇಡುವ ಕಾರ್ಯವನ್ನು ಮಾಡ್ತಾ ಇವೆ .. ಇಂತಹ ವಿಷಯಗಳು ಬಿಟ್ಟು,ನಾಡು-ನುಡಿ ಹಾಗು ಬೇರೆ ಸಮಸ್ಯೆಗಳ ಬಗ್ಗೆ ಮಾಧ್ಯಮಗಳು ಹಾಗು ನಾವೆಲ್ಲರೂ ಚಿಂತಿಸಿ ದುಡೀಬೇಕು..

Unknown ಅಂತಾರೆ...

HI.................

Unknown ಅಂತಾರೆ...

SUPPER SIR

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails