ಕಡೆಗಾನು ಹುಡಿಯಾಗಿ: ಜಿ ಎಸ್ ಶಿವರುದ್ರಪ್ಪ

(ಫೋಟೋಕೃಪೆ: http://kannada.yahoo.com/)

ಬೇಡಿಕೆ


ನಿನ್ನಡಿಯ ಹುಡಿ ನನ್ನ
ಮುಡಿಯ ಸಿಂಗರಿಸಿರಲಿ,
ಕಡೆಗಾನು ಹುಡಿಯಾಗಿ
ನಿನ್ನಡಿಗೆ ಸಲಲಿ.

ನಿನ್ನೊಲವಿನಂಬುಧಿಗೆ
ನನ್ನೆದೆಯ ಕರೆಯತೊರೆ
ಸಂತತವು ಹೊನಲಾಗಿ
ಹರಿಯುತಿರಲಿ.

ನಿನ್ನ ಕರುಣೆಯ ಕಿರಣ
ನಾನೆಂಬ ಹಿರಿಮಂಜ
ಕರಗಿಸುತ ಹೊಳೆ ಹೊಳೆದು
ಬೆಳಗುತಿರಲಿ.

ನನ್ನ ದೋಷಗಳೆಲ್ಲ
ನಿನ್ನ ಕ್ಷಮೆಯಾಯುಧದಿ
ಸಿಡಿಸಿಡಿದು ಹುಡಿಯಾಗಿ
ಹೋಗುತಿರಲಿ.

ಮುನ್ನ ಗುಣಗಳನುಳಿದು
ನಿನ್ನ ಗುಣದಲಿ ಬೆರೆದು
ಹೊಳೆ ಕಡಲಿಗಿಳಿವಂತೆ
ನಾನಳಿಯಲಿ.

- ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪ

ಪುಸ್ತಕ: ಸಮಗ್ರ ಕಾವ್ಯ
ಪ್ರಕಾಶಕರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಕೃಪೆ: ಕಣಜ 

ರಾಷ್ಟ್ರಕವಿ ಡಾ. ಜಿ ಎಸ್ ಶಿವರುದ್ರಪ್ಪನವರ ಈ ಕವಿತೆ ಅವರ ಕೊನೆಯಾಸೆಯಂತೆ ತೋರುತ್ತಿದೆ! ಇವರಿಗೆ ನಮ್ಮ ಮನದುಂಬಿದ ಕಂಬನಿಗಳು. ಇವರ ಆತ್ಮಕ್ಕೆ ಚಿರಶಾಂತಿ ಸಿಗಲಿ..

0 ಅನಿಸಿಕೆಗಳು:

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails